ಕಾಲಕ್ಕೆ ಸರಿಯಾಗಿ ಬಾರದ ಮಳೆರಾಯನ ಕುರಿತೊಂದು ಕವನ
ಮಳೆ..ಮಳೆ..ಮಳೆ..ಮಳೆ|
ಆಹಾ! ಮುಂಗಾರು ಮಳೆ|
ತಡವಾದರೂ ಕೊನೆಗೂ
ಬಂತೀ ಮುಂಗಾರು ಮಳೆ|
ಹೀಗೆ ಬಂದ ಹನಿಹನಿ ಮಳೆ|
ಅಲ್ಲಲ್ಲಿ ತೊಳೆದು ಹಾಕುತಿಹುದು
ಬರದ ಸೋಂಕಿನ ಕೊಳೆ|
ಅಗೋ ನೋಡಿ ಎಲ್ಲೆಲ್ಲೂ
ಮಿಣುಕುತಿಹುದು ಹೊಸ ಕಳೆ|
ಇದ ಕಂಡು ನಾಚುತಲಿರುವುದು
“ಮೇಘ ಪ್ರಿಯೆ” ಇಳೆ|
ಜೀವ ಸಂಕುಲಗಳ ಎದೆಯಲಿ
ಹರಿದಿಹುದು ನವೋಲ್ಲಾಸದ ಹೊಳೆ|
ಇಳೆಯ ಹೃದಯದೊಡಲ ಸೇರಿದ ಮಳೆ
ಹೇಳುತಿಹುದು, ಓ ಇಳೆ ನನ್ನ ಕ್ಷಮಿಸಿ ಬಿಡೆ|
ನಾ ಬಿಟ್ಟು ನನ್ನ ಮುಗಿಲ ಕರಿದಾದ ಮನೆ
ನಿನ್ನ ಸೇರುವುದರಲಿ ಸ್ವಲ್ಪ ತಡ ಆಯಿತು ಕಣೆ|
ನಿನ್ನ ಮನುಜ ಸುತರೇ ಇದಕ್ಕೆ ಕಾರಣ ಕಣೆ|
ನಾ ಬರುವ ಹಾದಿಯಲಿ ಮಾಲಿನ್ಯದ ಮುಳ್ಳ
ಅಡ್ಡಲಾಗಿ ಎಸೆಯುತಲಿವವರು ಅವರೇ ಕಣೆ|
ಆ ನಿನ್ನ ಮನುಜ ಸುತರು ಎಂದು ತಿಳಿಯುವರು
ಪರಿಸರವನು ಅರಿತು ಬಾಳುವ ಭವ್ಯ ಕಲೆ ?
(ಪದಗಳ ಅರ್ಥ
ಇಳೆ= ಭೂಮಿ, ಧರೆ, ಸುತರು= ಮಕ್ಕಳು, ಮಗ)
-ನಿಮ್ಮ ಸುನಿಲ್ ಮಲ್ಲೇನಹಳ್ಳಿ
ಬುಧವಾರ ೨೦ ಆಗಸ್ಟ್ ೨೦೦೮
ಮಳೆಯೆಂಬ “ಮುಗಿಲ ಮಾಯೆ”

ಮಳೆಯೆಂಬ “ಮುಗಿಲ ಮಾಯೆ” ಬಾರದೆ
ಬಂದ ಬರಗಾಲಕ್ಕೆ ಕಂಗಾಲಾದ ರೈತಾಪಿ ಜನರನ್ನು ಗುರಿಯಾಗಿ ಇಟ್ಟುಕೊಂಡು ಬರೆದ ಕವನ.
(ಈಗ ವರಗಾಲ ಆದರೆ ಕೆಲ ದಿನಗಳ ಹಿಂದೆ ಬರಿ ಬರಗಾಲ) - ನಿಮ್ಮ ಸುನಿಲ್ ಮಲ್ಲೇನಹಳ್ಳಿ
ಹಾವೇರಿಯ ಕಾವೇರಿದ ಕಪ್ಪು ನೆಲದಲಿ|
ಮಳೆಗಾಗಿ ಕಾದು ಬಿರಿದ ಆ ಹೊಲದಲಿ|
ಬಾರದ ನಿದ್ರೆಯನು ತಾ ಬರಿಸಿಕೊಂಡು|
ಕಂಡ ಹೊಂಗನಸನು ತಾ ಕರಗಿಸಿಕೊಂಡು|
ಆ ಕಡೆ ಮುಖ ಮಾಡಿ ಮಲಗಿರುವ ಮಾನವ|
ಈ ಕಡೆ ಮುಖ ಮಾಡಿ ಮಲಗಿಸಿರುವ ತನ್ನ ಶ್ವಾನವ|
ಯೋಚನೆ, ಆಲೋಚನೆಯಲಿ ಮಾನವ, ಶ್ವಾನವ
ಇಬ್ಬರದೂ ಬಿಡಿಸಲಾಗದ ಅವಿನಾಭಾವ ಸಂಬಂಧ!
ನೆಡೆಸಲು ಬದುಕಿನ ತೇರು| ಕಾಣಲೊಂದು ಕಿರು ಸೂರು
ಮಳೆಯನೇ ನಂಬಿ ಉಳುಮೆ ಮಾಡಿ ಸೋತಿಹನು ಅವ|
ತನ್ನೊಡಯನ ಸ್ಥಿತಿಯನು ಕಂಡು| ಅವಗೆ ನೆರವಾಗಲೆಂದು
ಬಾರದ ಮಳೆಯನು ಕೂಗಿ ಕರೆದು ಸೋತಿಹುದು ಅದು|
ಹೀಗೆ ಹೊಲಕ್ಕೆರಡು ಜೀವಗಳಂತೆ ಅದೇಷ್ಟೊ ಜೀವಗಳನು
ಪ್ರಕೃತಿಯು ಮಾತೆಯೂ ಕೈಬಿಟ್ಟಿರುವುದೊ? ಯಾರು ಬಲ್ಲರು?
(ಪದಗಳ ಅರ್ಥ, ಅವಿನಾಭಾವ= ಒಂದೇ ರೀತಿಯ, ಶ್ವಾನ = ನಾಯಿ)
Labels:
ಕವನಗಳು
ರವಿವಾರ ೩ ಆಗಸ್ಟ್ ೨೦೦೮
ಸ್ನೇಹ..

(ಸ್ನೇಹಿತರ ದಿನದ ಶುಭ ಸೂಚಕವಾಗಿ ಬರೆದ ಕವನ )
ಸ್ನೇಹ.. ಸ್ನೇಹ.. ಸ್ನೇಹ.. ಸ್ನೇಹ│
ಬಾಳ ಪಯಣದ ಗೀತೆಗೆ ಅದುವೇ ಗೇಯ│
ಗೆಳೆಯ ಗೆಳತಿಯರ ಅಕ್ಕರೆಯ ಗೆಳೆತನ│
ಬಾಳಲಿ ನಾವ್ ಪಡೆಕೊಂಡ ನಿಜ ಸಿರಿತನ│
ಜಗದಣ್ಣ ಕನಸಲಿ ಬಂದು ಹೇಳಿದ ಒಂದು ನೀತಿ│
ನಲ್ಲ ನಲ್ಲೆಯರಲಿ ಇರುವುದು ಆಗಸದೆತ್ತರದ ಪ್ರೀತಿ
ಎಂದಾದರೊಂದು ದಿನ ಅದು ಮುಗಿಯುವ ಭೀತಿ│
ಸ್ನೇಹದಲ್ಲಿ ಇರುವುದು ಎಂದೂ ತೀರದ ಪ್ರೀತಿ│
ಬಂಧು ಬಳಗ ಬಾಂಧವ್ಯವೊಂದು ಅವಿಭಾಜ್ಯ ಬಂಧನ│
ಅದರ ನಡುವೆ ಗೆಳೆತನವೊಂದು ನೆಮ್ಮದಿಯ ಸ್ಪಂದನ│
-ನಿಮ್ಮ ಸುನಿಲ್ ಮಲ್ಲೇನಹಳ್ಳಿ
(ಪದಗಳ ಅರ್ಥ
ಗೇಯ =ಸಂಗೀತ , ಅವಿಭಾಜ್ಯ= ಬಿಡಿಸಲಾಗದ , ಜಗದಣ್ಣ= ಶಿವ, ಈಶ್ವರ)
Labels:
ಕವನಗಳು
ಶನಿವಾರ ೨ ಆಗಸ್ಟ್ ೨೦೦೮
ಬಂಗಾರದ ಮನುಷ್ಯನಿಗೆ ಹೃದಯಸ್ಫರ್ಶಿ ನಮನ

ಶಿವಪ್ಪನಿಗೆ ಕಣ್ಣನ್ನು ಕೊಟ್ಟು│
ಶಬ್ಧವೇದಿಯ ಜಾಡನ್ನು ಹಿಡಿದು│
ದೂರದ ಬೆಟ್ಟ ಏರಿ ಗಿರಿ ಕನ್ಯೆ ರೂಪಕ್ಕೆ ಕರಗಿ│
ಗುರಿ ಮರೆತು ದಾರಿ ತಪ್ಪಿದ ಮಗನಾಗಿ│
ಪ್ರಾಯಶ್ಚಿತ್ತಕೊಸ್ಕರ ಮನದಲ್ಲಿ ಅನುರಾಗ ಅರಳಿಸಿಕೊಂಡು│
ಅದೇ ಕಣ್ಣಲ್ಲಿ ಸಾಧನೆಗೈದು│ ತ್ರಿಮೂರ್ತಿಗಳ ವರ ಪಡೆದು│
ಭಲೇ ಹುಚ್ಚನಾಗಿ ಜಾಣ್ಮೆಯನ್ನು ತೋರಿ│
ಬಹದ್ದೂರ್ ಗಂಡಾಗಿ ಶೌರ್ಯವನ್ನು ಬೀರಿ│
ಆಕಸ್ಮಿಕವಾಗಿ ಕಸ್ತೂರಿ ನಿವಾಸಕ್ಕೆ ಬಂದು│
ಜೀವನ ಚೈತ್ರದಲ್ಲಿ ಮಿಂದು│
ಒಡಹುಟ್ಟಿದವರೊಡಗೂಡಿ│
ಶ್ರಾವಣ ಬಂತೆಂದು ಹಾಡಿ│
ಭಾಗ್ಯದ ಬಾಗಿಲಲ್ಲಿ│
ಹೊಸ ಬೆಳಕನು ಚೆಲ್ಲಿ│
ನೀತಿ ಇಲ್ಲದ ಸಿರಿವಂತರ ಸಂಪತ್ತಿಗೆ ಸವಾಲ್ ಹಾಕಿ│
ಮೇಯರ್ ಮುತ್ತಣ್ಣನಾಗಿ│
ಭಾಗ್ಯದ ಲಕ್ಷ್ಮಿ ಬಾರಮ್ಮನಿಗೆ ಮನಸೋತು│
ಎರಡು ಕನಸನು ಹೊತ್ತು│
ಚೂರಿ ಚಿಕ್ಕಣ್ಣನ ವೇಷ ಧರಿಸಿ│
ಅಪರೇಷನ್ ಡೈಮಂಡ್ ರಾಕೆಟ್ನಲ್ಲಿ ಬಾನಂಗಳಕ್ಕೆ ಹೋಗಿ│
ಧ್ರುವತಾರೆಯನು ಹೊತ್ತು ತಂದು ಸಂಭ್ರಮಿಸಿ│
ಗಂಧದ ಗುಡಿಯಲಿ ಇರಿಸಿ│
ಕಾಮನಬಿಲ್ಲಿನಲ್ಲಿ ಬೆಸೆದು ಉಡುಗೊರೆಯಾನ್ನಾಗಿಸಿ│
ಪ್ರೇಮದಕಾಣಿಕೆಯಾಗಿ ನೀಡಿ│
ಯಾವ ಕವಿಯು ಬರೆಯಲಾರದ ಗೀತೆಯನ್ನು ಹಾಡಿ│
ಕನ್ನಡಿಗರ ಹೃದಯವನ್ನು ಸದ್ದಿಲ್ಲದೆ ಕದ್ದು ತನ್ನ ಅಭಿನಯನದಲ್ಲಿ ಇರಿಸಿ│
ಬಂಗಾರದ ಮನುಷ್ಯಯೆಂಬ ಹೆಸರನಿಟ್ಟ ತಾಯಿಗೆ ತಕ್ಕಮಗನಾಗಿ ಬಾಳಿ│
ಒಲವನ್ನು ಸಾಕ್ಷಾತ್ಕಾರಿಸಿಕೊಂಡು ಹೋದರು ನಮ್ಮಣ್ಣ ರಾಜಣ್ಣ│
ನೆಡೆ ನುಡಿ ನಟನೆಯಲ್ಲಿ ಎಂದೆದಿಂಗೂ ಅವರಿಗೆ ಅವರೇ ಸಾಟಿ│
ವಿಧಿಕರೆಗೆ ಓಗೊಟ್ಟು ಅವರು ಹೋದಾಗ ಕಂಬನಿ ಧಾರೆ ಹರಿಸಿದ ಜೀವಗಳವು ಕೋಟಿ│
ರಚನೆ, ನಿಮ್ಮ ಸುನಿಲ್ ಮಲ್ಲೇನಹಳ್ಳಿ
Labels:
ಕವನಗಳು
ಶುಕ್ರವಾರ ೧ ಆಗಸ್ಟ್ ೨೦೦೮
ಬಾಳ ಗೆಳತಿಗೊಂದು ಕವನ (ಕಲ್ಪನೆಯಲಿ ಅರಳಿದ ಕಾವ್ಯ)
ಆ ಹುಣ್ಣಿಮೆ ರಾತ್ರಿಯದು
ಬಲು ಸೊಗಸು│
ಅಂದು ನಾ ಕಂಡ ನನ್ನ ಅವಳ
ಬಾಂಧವ್ಯದ ಮಧುರ ಸವಿಗನಸು│
ತನುಮನದಲ್ಲಿ ತಂದಿಹುದು
ಬಗೆ ಬಗೆ ರೂಪದ ಹುಮ್ಮಸ್ಸು│
ಇಂದಾಗಿಹುದು ಅವಳ ಚೆಲುವಿನ ವರ್ಣನೆಯ
ಕವನವಾಗಿ ಬರೆಯುವ ಮನಸು│
ಓ ಭಾವವೇ ನೀ ಅದಕ್ಕೆ ಸಹಕರಿಸು│
ನಿನ್ನೊಡಲಿನಿನ್ದ ಸುಲಲಿತ ಪದಗಳನು ಹೂಂಕರಿಸು│
- ಸುನಿಲ್ ಮಲ್ಲೇನಹಳ್ಳಿ
(ಮುಂದಿನ ಕವನದಲಿ ಅವಳ ಚೆಲುವಿನ ವರ್ಣನೆ)
ಬಲು ಸೊಗಸು│
ಅಂದು ನಾ ಕಂಡ ನನ್ನ ಅವಳ
ಬಾಂಧವ್ಯದ ಮಧುರ ಸವಿಗನಸು│
ತನುಮನದಲ್ಲಿ ತಂದಿಹುದು
ಬಗೆ ಬಗೆ ರೂಪದ ಹುಮ್ಮಸ್ಸು│
ಇಂದಾಗಿಹುದು ಅವಳ ಚೆಲುವಿನ ವರ್ಣನೆಯ
ಕವನವಾಗಿ ಬರೆಯುವ ಮನಸು│
ಓ ಭಾವವೇ ನೀ ಅದಕ್ಕೆ ಸಹಕರಿಸು│
ನಿನ್ನೊಡಲಿನಿನ್ದ ಸುಲಲಿತ ಪದಗಳನು ಹೂಂಕರಿಸು│
- ಸುನಿಲ್ ಮಲ್ಲೇನಹಳ್ಳಿ
(ಮುಂದಿನ ಕವನದಲಿ ಅವಳ ಚೆಲುವಿನ ವರ್ಣನೆ)
Labels:
ಕವನಗಳು
ಇದಕ್ಕೆ ಚಂದಾದಾರರಾಗಿ:
ಪೋಸ್ಟ್ಗಳು (Atom)
