ಶುಕ್ರವಾರ, ಜುಲೈ 11, 2008

ಆ ದೈವ ಕೊಟ್ಟ ಈ ಬದುಕು..

ಆ ದೈವ ಕೊಟ್ಟ ಈ ಬದುಕು..

ಒಬ್ಬನ ಪಾಲಿಗೆ ಆಗಿಹುದು ಥಳುಕು..

ಮತ್ತೊಬ್ಬನ ಪಾಲಿಗೆ ಆಗಿಹುದು ಹುಳುಕು..

ಇನ್ನೊಬ್ಬನ ಪಾಲಿಗೆ ಆಗಿಹುದು ಬಳುಕು..

ಮಗದೊಬ್ಬನ ಪಾಲಿಗೆ ಆಗಿಹುದು ಮುರುಕು..

ಥಳುಕೋ..ಹುಳುಕೋ..ಬಳುಕೋ..ಮುರುಕೋ..

ಅದೃಷ್ಟದಾಟ ಮುಗಿದಾಗ ಬರುವುದು ಉಸಿರಿಗೆ ತೊಡಕು..

ಕೊನೆಯಲಿ ಈ ಬದಕು ಆಗುಹುದು ಯಮನ ಪಾಲಿನ ಸರುಕು!!

ಕವನದ ಸಾರಾಂಶ..

ಆ ದೈವನು ಕೊಟ್ಟು ನಮ್ಮಗಳ ಬದುಕು ನಮಗೆ ತಿಳಿದಿರುವ ಹಾಗೆ ಒಬ್ಬನು ಹುಟ್ಟುವಾಗಲೇ ಸಿರಿವಂತನಾಗಿ ಹುಟ್ಟುತ್ತಾನೆ. ಅಂಥವರ ಪಾಲಿಗೆ ಬದುಕೆಂಬುದು ಬಹಳ ಹಿತವಾಗಿರುತ್ತದೆ. ಆದರೆ ಇನ್ನೂ ಕೆಲವರು ಜನಿಸುವಾಗಲೇ ಬಹಳ ಬಡತನದ ಕುಟುಂಬದಲ್ಲಿ ಜನಿಸುತ್ತಾರೆ ಅಂಥವರ ಪಾಲಿಗೆ ಬದುಕೆಂಬುದು ಹುಳುಕಿನ ತರಹ ಇರುತ್ತದೆ. ಮತ್ತೆ ಕೆಲವರ ಪಾಲಿಗೆ ಬದುಕು ಬಳುಕು ಆಗಿರುತ್ತದೆ. ಅಂದರೆ ಅವರು ಜೀವನದಲ್ಲಿ ಏನು ಬಯಿಸುತ್ತಾರೋ ಅದು ಅವರಿಗೆ ಒಲಿದು ಬರುತ್ತದೆ. ಅವರು ಬಹಳ ಅದೃಷ್ಟವನ್ತರಾಗಿರುತ್ತಾರೆ. ಮತ್ತೆ ಇನ್ನೂ ಕೆಲವರ ಪಾಲಿಗೆ ಬದುಕು ಮುರುಕು ಆಗಿರುತ್ತದೆ. ಅಂದರೆ ಅವರು ಜೀವನದಲ್ಲಿ ಏನ್ನೆಲ್ಲಾ ಕಷ್ಟಪಟ್ಟರು ಅದೃಷ್ಟ ಅವರ ಜೊತೆಯಲ್ಲಿ ಇರುವುದಿಲ್ಲ.

ಆದರೆ ಬದುಕಲ್ಲಿ ಯಾರು ಏನೇ ಆಗಿರಲಿ ಕೊನೆಗೆ ಕಾಲ ಬಂದಾಗ ಎಲ್ಲರೂ ಒಬ್ಬರ ಮೇಲೆ ಒಬ್ಬರಾದಂತೆ ಭಗವಂತನ ಸನಿಹಕ್ಕೆ ಹೋಗಲೇ ಬೇಕು.

-ಸುನಿಲ್ ಮಲ್ಲೇನಹಳ್ಳಿ

ಕಾಮೆಂಟ್‌ಗಳಿಲ್ಲ: