![](https://blogger.googleusercontent.com/img/b/R29vZ2xl/AVvXsEhIHxm4LTHz_sCwRF9-yMozyCwcV3E0F5oeVJgvQsSMkQvRE9nutTeRZAPrLkmcFyuvN_wjAnw9LW9etSfFm-64akAVjl3UwWi25yDFgl2jr8WRY2hdsRC_AcIhtuWGfTn7iInR3vT6yrE/s400/Former33.jpg)
ಮಳೆಯೆಂಬ “ಮುಗಿಲ ಮಾಯೆ” ಬಾರದೆ
ಬಂದ ಬರಗಾಲಕ್ಕೆ ಕಂಗಾಲಾದ ರೈತಾಪಿ ಜನರನ್ನು ಗುರಿಯಾಗಿ ಇಟ್ಟುಕೊಂಡು ಬರೆದ ಕವನ.
(ಈಗ ವರಗಾಲ ಆದರೆ ಕೆಲ ದಿನಗಳ ಹಿಂದೆ ಬರಿ ಬರಗಾಲ) - ನಿಮ್ಮ ಸುನಿಲ್ ಮಲ್ಲೇನಹಳ್ಳಿ
ಹಾವೇರಿಯ ಕಾವೇರಿದ ಕಪ್ಪು ನೆಲದಲಿ|
ಮಳೆಗಾಗಿ ಕಾದು ಬಿರಿದ ಆ ಹೊಲದಲಿ|
ಬಾರದ ನಿದ್ರೆಯನು ತಾ ಬರಿಸಿಕೊಂಡು|
ಕಂಡ ಹೊಂಗನಸನು ತಾ ಕರಗಿಸಿಕೊಂಡು|
ಆ ಕಡೆ ಮುಖ ಮಾಡಿ ಮಲಗಿರುವ ಮಾನವ|
ಈ ಕಡೆ ಮುಖ ಮಾಡಿ ಮಲಗಿಸಿರುವ ತನ್ನ ಶ್ವಾನವ|
ಯೋಚನೆ, ಆಲೋಚನೆಯಲಿ ಮಾನವ, ಶ್ವಾನವ
ಇಬ್ಬರದೂ ಬಿಡಿಸಲಾಗದ ಅವಿನಾಭಾವ ಸಂಬಂಧ!
ನೆಡೆಸಲು ಬದುಕಿನ ತೇರು| ಕಾಣಲೊಂದು ಕಿರು ಸೂರು
ಮಳೆಯನೇ ನಂಬಿ ಉಳುಮೆ ಮಾಡಿ ಸೋತಿಹನು ಅವ|
ತನ್ನೊಡಯನ ಸ್ಥಿತಿಯನು ಕಂಡು| ಅವಗೆ ನೆರವಾಗಲೆಂದು
ಬಾರದ ಮಳೆಯನು ಕೂಗಿ ಕರೆದು ಸೋತಿಹುದು ಅದು|
ಹೀಗೆ ಹೊಲಕ್ಕೆರಡು ಜೀವಗಳಂತೆ ಅದೇಷ್ಟೊ ಜೀವಗಳನು
ಪ್ರಕೃತಿಯು ಮಾತೆಯೂ ಕೈಬಿಟ್ಟಿರುವುದೊ? ಯಾರು ಬಲ್ಲರು?
(ಪದಗಳ ಅರ್ಥ, ಅವಿನಾಭಾವ= ಒಂದೇ ರೀತಿಯ, ಶ್ವಾನ = ನಾಯಿ)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ